25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪೆರಿಂಜೆಯ ಶಾಲೆಯಲ್ಲಿ ಉಜಿರೆಯ ಶ್ರೀ ಧ. ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
error: Content is protected !!