July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ವೇಣೂರು ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
error: Content is protected !!