25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಅಳದಂಗಡಿ: ಮಾರ್ನಿಂಗ್ ಕ್ರಿಕೆಟರ್ಸ್ ನಿಂದ ರಸ್ತೆ ರಿಪೇರಿ, ಚರಂಡಿ ದುರಸ್ಥಿ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ,ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ 16ನೇ ವರ್ಷದ ಸಾಂಸ್ಕೃತಿಕ ವೈಭವ , ಸುವರ್ಣ ರಂಗ ಸಮ್ಮಾನ್ ಪ್ರಶಸ್ತಿ-2026 ಪ್ರದಾನ

Suddi Udaya

ಎಕ್ಸೆಲ್ ನಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ನಾಳೆಯಿಂದ ಉಚಿತ ಎಕ್ಸೆಲ್ ಕನೆಕ್ಟ್ ಕ್ಲಾಸ್

Suddi Udaya
error: Content is protected !!