23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳ ತರಬೇತಿ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya
error: Content is protected !!