38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ರಬ್ಬರ್ ಕೃಷಿಕರ ಸಮಸ್ಯೆ ಬಗ್ಗೆ ರಾಜ್ಯಸಭಾ ಸದಸ್ಯ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಉಜಿರೆ: ಗಾಂಧಿನಗರದಲ್ಲಿ ಮೊಸರು ಕುಡಿಕೆ ಮತ್ತು ಶ್ರೀ ಗಣೇಶೋತ್ಸವದ ಪ್ರಯುಕ್ತ ಕ್ರೀಡಾಕೂಟ

Suddi Udaya

ಕಲ್ಲೇರಿ: ಕಾರು ಮತ್ತು ಸ್ಕೂಟಿಯ ನಡುವೆ ಭೀಕರ ರಸ್ತೆ ಅಪಘಾತ: ಓರ್ವ ಮೃತ್ಯು

Suddi Udaya
error: Content is protected !!