25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.14 ರಂದು ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು: ಮಾಲಾಡಿ ಬಿ ಎಂ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya
error: Content is protected !!