July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ವತಿಯಿಂದ ಗಣರಾಜ್ಯೋತ್ಸವ ಆಚರಣೆ ಹಾಗೂ ವಾರ್ಷಿಕ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೇತೃತ್ವದಲ್ಲಿ – ವಸಂತ ಮರಕಡ ಅಧ್ಯಕ್ಷತೆಯ 2023-25 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ನಾಟ್ಯ ತರಬೇತಿ ಆರಂಭ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ತೆಕ್ಕಾರುವಿನ ಆಯಿಷಾತುಲ್ ರಫೀಯ ರವರಿಗೆ 568 ಅಂಕ

Suddi Udaya
error: Content is protected !!