25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya
error: Content is protected !!