22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಶುಪರಿವೀಕ್ಷಕ ಹಲ್ಲೆ ಆರೋಪ; ಪಟ್ರಮೆಯ ನಿವಾಸಿ ಕುಸಿದು ಬಿದ್ದು ಮೃತ್ಯು

ಕೊಕ್ಕಡ: ಕುಡಿದ ಮತ್ತಿನಲ್ಲಿ ಪಶುಪರಿವೀಕ್ಷಕ ಹಲ್ಲೆಯಿಂದ ಸ್ಥಳೀಯ ನಿವಾಸಿ ಸಾವನ್ನಪ್ಪಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಧಮ೯ಸ್ಥಳ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪಟ್ರಮೆ ಗ್ರಾಮದ ಮೈಕೆ ನಿವಾಸಿ ಕೃಷ್ಣ ಯಾನೆ ಕಿಟ್ಟ(55ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ.‌ ‌‌ಅನಾರೋಗ್ಯದಿಂದ ಪುತ್ತೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಮೇ 13ರಂದು ಕೊಕ್ಕಡಕ್ಕೆ ಬಂದ ಕೃಷ್ಣ ಅವರಿಗೆ ಅಲ್ಲೇ ಕುಡಿದ ಮತ್ತಿನಲ್ಲಿದ್ದ ಕೊಕ್ಕಡದ ಪಶುಪರಿವೀಕ್ಷಕ ಡಾ.ಕುಮಾರ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಕೃಷ್ಣ ಅವರು ಅಸ್ವಸ್ಥ ಗೊಂಡು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ದೆಂದು ವರದಿಯಾಗಿದೆ. ಧರ್ಮಸ್ಥಳ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಮೃತರಿಗೆ ಪತ್ನಿ, ಓರ್ವ ಪುತ್ರಿ ಹಾಗೂ ಸಹೋದರ ಇದ್ದಾರೆ.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಶುದ್ಧ ನೀರು ಬಳಕೆಯಿಂದ ಆರೋಗ್ಯ ರಕ್ಷಣೆ: ಮಾತೃಶ್ರೀ ಹೇಮಾವತಿ ವಿ.ಹೆಗ್ಗಡೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!