24.6 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ದೇವಿಗೆ ಧೃಡಕಲಶ: ಅಭಿನಂದನಾ ಸಭೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya
error: Content is protected !!