July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ವಿಧಾನ ಪರಿಷತ್ ಕಲಾಪ; ಬಿ-ಖಾತೆಯಿಂದ ಪ್ರಯೋಜನವಾಗುತ್ತಿಲ್ಲ, ಫಾರ್ಮ್-3 ನೀಡಲು ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಮುಂದೆ ಸ್ಪರ್ಧಿಸುವ ಅಪೇಕ್ಷೆ: ಪತ್ರಿಕಾಗೋಷ್ಠಿ

Suddi Udaya
error: Content is protected !!