23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಯಕ್ಷಭಾರತಿ ಸಂಸ್ಥೆಯ ವತಿಯಿಂದ ಕೋಳ್ಯೂರು ರಾಮಚಂದ್ರ ರಾವ್ ರವರಿಗೆ ಸನ್ಮಾನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

Suddi Udaya

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಡ ಮೂಡಾಯಿಬೆಟ್ಟು ಹಂದಿ ಸಾಕಾಣಾ ಕೇಂದ್ರದಿಂದ ಹಂದಿಯನ್ನು ಎಳೆದೊಯ್ದ ಚಿರತೆ

Suddi Udaya

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya
error: Content is protected !!