25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ರಾಜ್ಯ ಮಟ್ಟದ ಜೂನಿಯರ್ ರೆಡ್ ಕ್ರಾಸ್ ಪರೀಕ್ಷೆ : ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ಸ್ನೇಹಜ್ಯೋತಿ ಮಹಿಳಾ ಒಕ್ಕೂಟ ಬೆಳ್ತಂಗಡಿ ವತಿಯಿಂದ ಚಿರತೆ ಹಾವಳಿ ಬಗ್ಗೆ ಅರಣ್ಯ ಸಚಿವರಿಗೆ ಮನವಿ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!