25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಜ.5: ಓಡಿಲ್ನಾಳ ಫ್ರೆಂಡ್ಸ್ ಪಣೆಜಾಲು ವತಿಯಿಂದ 14ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಚಂದ್ರಾವತಿ ಆಚಾರ್ಯ ನಿಧನ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಚಿನ್ನವನ್ನು ತೊಳೆದುಕೊಡುವುದಾಗಿ ಹೇಳಿದಾತ ಸರದೊಂದಿಗೆ ಪರಾರಿ

Suddi Udaya
error: Content is protected !!