25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ : ಭಾರತೀಯ ಗಡಿ ಭದ್ರತಾ ಪಡೆಯಲ್ಲಿ ಸೇವೆಗೈದ ನಿವೃತ್ತ ಯೋಧ ಗಣೇಶ್ ಬಿ ಎಲ್ ರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಕಾರ್ಯಕ್ರಮ

ಲಾಯಿಲ: ಭಾರತೀಯ ಗಡಿ ಭದ್ರತಾ ಪಡೆಯಲ್ಲಿ 21 ವರ್ಷಗಳಿಂದ ದೇಶ ಸೇವೆಗೈದು ಪಂಜಾಬ್, ಡೆಲ್ಲಿ, ಉತ್ತರಪ್ರದೇಶ, ಜಮ್ಮುಕಾಶ್ಮೀರ, ಅಸ್ಸಾಂ, ರಾಜಸ್ಥಾನ್, ಬೆಂಗಳೂರು, ಮಣಿಪುರ, ಪಂಜಾಬ್, ಮುಂತಾದೆಡೆ ಸೇವೆಗೈದು ಸೇವಾ ನಿವೃತ್ತಿ ಹೊಂದಿದ ಲಾಯಿಲದ ನಿವೃತ್ತ ಯೋಧ ಗಣೇಶ್ ಬಿ ಎಲ್ ಅವರಿಗೆ ಅಭಿನಂದನಾ ಕಾರ್ಯಕ್ರಮವು ಮೇ.12ರಂದು ಲಾಯಿಲ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಬೆಳ್ತಂಗಡಿ ನ್ಯಾಯವಾದಿ ಧನಂಜಯ ರಾವ್ ಆಭಿನಂದನಾ ಭಾಷಣ ಮಾಡಿದರು.


ಈ ಸಂದರ್ಭದಲ್ಲಿ ಮಾಜಿ ಸೈನಿಕ ಅಧ್ಯಕ್ಷ ಸುನಿಲ್ ಶೆಣೈ, ಯೋಧರ ಮಾತೃ ಪಿತೃರಾದ ಕೃಷ್ಣಪ್ಪ ನಾಯ್ಕ್ ಮತ್ತು ಶ್ರೀಮತಿ ವಾರಿಜ, ಸಹೋದರ ನ್ಯಾಯವಾದಿ ಸಂತೋಷ್ ಕುಮಾರ್, ಲಾಯಿಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರುಕ್ಮಯ ಕನ್ನಾಜೆ, ಮಾಜಿ ಉಪಾಧ್ಯಕ್ಷ ಗಣೇಶ್ ಲಾಯಿಲ, ಬೆಳ್ತಂಗಡಿ ಯಕ್ಷ ಪಟ್ಲ ಫೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ, ವಿಠಲ್ ಶೆಟ್ಟಿ ಲಾಯಿಲ, ಹಾಗೂ ಕರ್ನೋಡಿ ದ.ಕ.ಜಿ.ಪಂ.ಉ.ಹಿ.ಪ್ರಾ.ಶಾಲೆ. ಹಳೆ ವಿದ್ಯಾರ್ಥಿ ಸಂಘ, ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ್ಯ ಸಭಾ, ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಠಮಿ ಸಮಿತಿ, ಲಾಯಿಲ ಓಂ ಶಕ್ತಿ ಗೆಳೆಯರ ಬಳಗ, ಲಾಯಿಲ ಮಾರಿಗುಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಲಾಯಿಲ ನೂರುಲ್ ಹುದಾ ಎಜ್ಯುಕೇಶನ್ & ಚಾರಿಟೇಬಲ್ ಟ್ರಸ್ಟ್ , ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಸೇವಾ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ಸಂಸತ್ ಪದಗ್ರಹಣ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಆಯುಷ್ಮಾನ್ ಭವ ಆರೋಗ್ಯ ಸೇವೆಗೆ ಚಾಲನೆ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಉಜಿರೆ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ – ಹದಾ ಆಚರಣೆ

Suddi Udaya
error: Content is protected !!