25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಜಿನಭಜನಾ ಸ್ಪರ್ಧೆ :ಮಂಗಳೂರು ವಲಯ ಮಟ್ಟದಲ್ಲಿ ಅಳದಂಗಡಿ ತಂಡ ತೃತೀಯ ಸ್ಥಾನ

Suddi Udaya

ಸೋಣಂದೂರು: ಜಿಲ್ಲಾಮಟ್ಟದ ಪುರುಷರ 55 ಕೆಜಿ ವಿಭಾಗದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಗೇರುಕಟ್ಟೆ ಸಮೀಪದ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ದರ್ಗಾ ಶರೀಫ್ ನ ವರ್ಷಂಪ್ರತಿ ನಡೆಯುವ ಉರೂಸ್ ಸಮಾರಂಭದ ಪೋಸ್ಟರ್ ಬಿಡುಗಡೆ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಲಾಯಿಲ ಕುಂಟಿನಿ ಬೂತ್ ಸಮಿತಿ ವತಿಯಿಂದ ಎಸ್.ಡಿ.ಪಿ.ಐ ಸಂಸ್ಥಾಪನ ದಿನಾಚರಣೆ

Suddi Udaya
error: Content is protected !!