24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಮುಳಿಯ ಜುವೆಲ್ಸ್ ನಲ್ಲಿ “ಕನ್ನಡ ಬದುಕು ಬಂಗಾರ” ಕಾರ್ಯಕ್ರಮ

Suddi Udaya
error: Content is protected !!