July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಬಂದಾರು: ಬಟ್ಲಡ್ಕ ದರ್ಗಾ ಶರೀಫ್ ನಲ್ಲಿ ಉರೂಸ್ ಮುಬಾರಕ್

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!