April 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಬೆನಕ ಹೆಲ್ತ್ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಜಗತ್ತು ಕಂಡ ಅಪ್ರತಿಮ ದಾದಿ( Nurse ) Florence Nightingale  ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿ ವರ್ಷ ಇದನ್ನು ಆಚರಿಸಿಕೊಂಡು ಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡಂತೆ ದಾದಿಯರ ದಿನ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ ಸರಿಯಾದ ರೀತಿಯಲ್ಲಿ ರೋಗಿಗಳಿಗೆ ಶುಶ್ರೂಷೆ ನೀಡಲು ದಾದಿಯರ ಕರ್ತವ್ಯ ಮಹತ್ವವಾದದ್ದು, ಅವರು ಆಸ್ಪತ್ರೆಯ ಹೃದಯವಿದ್ದಂತೆ. ನಮ್ಮ ಆಸ್ಪತ್ರೆಯು ಈ ಹಂತ ತಲುಪಲು ಇಲ್ಲಿ ಸೇವೆಸಲ್ಲಿಸುತ್ತಿರುವ ದಾದಿಯರ ಕರ್ತವ್ಯ ಶ್ಲಾಘನೀಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯಲ್ಲಿ 35 ವರ್ಷ ಸೇವೆಸಲ್ಲಿಸಿ ನಿವೃತ್ತರಾದ ಹಿರಿಯ ದಾದಿ ಶ್ರೀಮತಿ ಫಿಲೋಮಿನಾರವರನ್ನು ಅವರು ನೀಡಿದ ಸೇವೆಯನ್ನು ಸ್ಮರಿಸಿ ಡಾ| ಗೋಪಾಲಕೃಷ್ಣ ಮತ್ತು ಡಾ| ಭಾರತಿ ದಂಪತಿಗಳು ಶಾಲುಹೊದಿಸಿ ಫಲಪುಷ್ಪ ಮತ್ತು ಸ್ಮರಣಿಕೆ ನೀಡಿ ಗೌರವಿಸಿದರು.


ಸಿಸ್ಟೆರ್ ಅಶ್ವಿನಿ.ಕೆ ಯವರು ಈ ದಿನದ ಮಹತ್ವ ಕುರಿತು ಮಾಹಿತಿ ನೀಡಿದರು. ಸಿಸ್ಟರ್ ಅನಿಲ ಬೆನ್ನಿ ಯವರು ಆಸ್ಪತ್ರೆಯ ಎಲ್ಲ ದಾದಿಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಆಸ್ಪತ್ರೆಯ ಪಿ.ಅರ್. ಓ ಎಸ್. ಜಿ ಭಟ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಡಾ| ಭಾರತಿ ಜಿ. ಕೆ ಯವರು ಧನ್ಯವಾದ ಸಮರ್ಪಿಸಿದರು. ಕೊನೆಯಲ್ಲಿ ಆಸ್ಪತ್ರೆಯ ದಾದಿಯರು ಮತ್ತು ಸಿಬ್ಬಂದಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.

Related posts

ಫೆ.28: ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರತ್ನಾವತಿ ಪಿ ಸೇವಾ ನಿವೃತ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಮಾ.22-23: ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ