September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಫ್ರೌಡ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಲ್ಮಂಜ: ಅಕ್ಷಯ ನಗರದಲ್ಲಿ ಕಾಡಾನೆ ಓಡಾಟ

Suddi Udaya

ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವಿಜೃಂಭಣೆಯ ಮಹಾ ಶಿವರಾತ್ರಿ ಉತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

Suddi Udaya

ಸಂದೀಪ್ ಸುಂದರ್ ನೀರಲ್ಕೆರವರಿಂದ ಬಡಗಕಾರಂದೂರು ಶಾಲೆಗೆ ಕಂಪ್ಯೂಟರ್ ಟೇಬಲ್ ಗಳ ಕೊಡುಗೆ

Suddi Udaya
error: Content is protected !!