July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

ಕರಾಯ : ನೀರು ಕುಡಿಯುವ ನೆಪದಲ್ಲಿ ಮನೆಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಕರಾಯ ಗ್ರಾಮದಲ್ಲಿ ಮೇ 11 ರಂದು ನಡೆದಿದೆ.

ಕರಾಯದ ಸುಹೈಬಾ (25) ಎಂಬವರು ಮೇ 11 ರಂದು ಬೆಳಿಗ್ಗೆ, ಮನೆಯ ಬಳಿಯಿದ್ದಾಗ, ಮನೆಯ ಅಂಗಳಕ್ಕೆ ಅಪರಿಚಿತ ಓರ್ವ ಗಂಡಸು ಮತ್ತು ಓರ್ವ ಹೆಂಗಸು ಬಂದಿದ್ದಾರೆ. ಬಂದವರು ಸುಹೈಬಾ ಬಳಿ ಮಾತನಾಡಿ ಮನೆಯಲ್ಲಿರುವ ಸದಸ್ಯರುಗಳ ಬಗ್ಗೆ ವಿಚಾರಿಸಿ, ಕುಡಿಯಲು ನೀರು ಕೇಳಿದ್ದಾರೆ. ಸುಹೈಬಾ ನೀರು ತರಲು ಹೋದಾಗ ಬಂದ ಮಹಿಳೆ ಹಾಗೂ ಗಂಡಸು ಮನೆಯ ಒಳಗೆ ಪ್ರವೇಶಿಸಿ, ಮನೆಯಲ್ಲಿದ್ದ ಗೋಡ್ರೇಜ್ ಬಾಗಿಲು ತೆರೆದು ಹುಡುಕಾಡುತ್ತಿದ್ದರು. ಕೂಡಲೇ ಸುಹೈಬಾ ಬೊಬ್ಬೆ ಹಾಕಿ ತನ್ನ ಗಂಡನಿಗೆ ಕರೆ ಮಾಡಲು ಯತ್ನಿಸಿದ್ದು, ಆರೋಪಿಗಳು ಸುಹೈಬಾ ಕೈಯಲ್ಲಿದ್ದ ಮೊಬೈಲ್ ಫೋನನ್ನು ಎಳೆದು ಬಿಸಾಡಿ, ಹಲ್ಲೆ ನಡೆಸಿ, ಚೂರಿಯನ್ನು ತೋರಿಸಿ ಬೆದರಿಸಿ, ಆಕೆಯ ಕೈಯಲ್ಲಿದ್ದ ಎರಡು ಚಿನ್ನದ ಉಂಗುರಗಳನ್ನು ಹಾಗೂ ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡಿದ್ದಾರೆ.

ಇನ್ನು ಈ ವೇಳೆ ಸುಹೈಬಾ ಬೊಬ್ಬೆ ಕೇಳಿ ನೆರೆಮನೆಯ ಮಹಿಳೆ ಬರುತ್ತಿರುವುದನ್ನು ಕಂಡ ಆರೋಪಿಗಳು ಬೈಕಿನಲ್ಲಿ ಪರಾರಿಯಾಗಿದ್ದು, ಅವರು ದೋಚಿದ ಆಭರಣಗಳ ಅಂದಾಜು ಮೌಲ್ಯ ರೂ 1,00,000/- ಆಗಬಹುದು ಎನ್ನಲಾಗಿದೆ. ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Related posts

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಅಂತರಾಷ್ಟ್ರಿಯ ಯೋಗ ದಿನಾಚರಣೆ.

Suddi Udaya

ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಅಪರಿಚಿತ ಮೃತದೇಹ ಪತ್ತೆ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಬಂದಾರು: ಬೈಪಾಡಿ ಭಗವಾನ್ ಶಾಂತಿನಾಥ ಸ್ವಾಮಿ ಬಸದಿಯಲ್ಲಿ ಶಾಂತಿಚಕ್ರ ಆರಾಧನೆ

Suddi Udaya
error: Content is protected !!