25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟು ಒಂಬತ್ತನೇ ತಿರುವಿನ ಮಧ್ಯೆ ಒಂಟಿ ಸಲಗ ಭಾನುವಾರ ರಾತ್ರಿ ಮತ್ತೆ ಕಂಡುಬಂದಿದೆ.
ಭಾನುವಾರ ರಾತ್ರಿ 8ರ ಸುಮಾರಿಗೆ ಕಾಡಾನೆ ರಸ್ತೆಯ ತೀರಾ ಬದಿಯಲ್ಲಿ ಇದ್ದು ಕೊಂಚ ಹೊತ್ತು ವಾಹನ ಸವಾರರು ಎರಡು ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿದ್ದರು.

ಆನೆ ಕಾಡಿನತ್ತ ತಿರುಗುತ್ತಿದ್ದಂತೆ ವಾಹನಗಳು ಓಡಾಟ ನಡೆಸಿದವು. ಕಳೆದ ಎರಡು ದಿನಗಳ ಹಿಂದೆ ಘಾಟಿ ಪ್ರದೇಶದಲ್ಲಿ ಹಗಲು ಹೊತ್ತು ಕಂಡುಬಂದಿತ್ತು.
ಘಾಟಿ ಪರಿಸರದಲ್ಲಿ ಭಾನುವಾರ ಉತ್ತಮ ಮಳೆಯಾಗಿದ್ದು ಮಂಜು ಕವಿದ ವಾತಾವರಣವು ಇದ್ದು ಆನೆ ಇರುವುದು ತೀರ ಸಮೀಪಕ್ಕೆ ಬರುತ್ತಿದ್ದಂತೆ ವಾಹನ ಸವಾರರಿಗೆ ತಿಳಿದುಬಂದಿತ್ತು. ಆನೆ ಕಂಡ ಜೀಪು ಚಾಲಕನೋರ್ವ ಗಲಿಬಿಲಿಗೊಂಡ ಕಾರಣ ಆನೆಯ ಸಮೀಪವೇ ವಾಹನ ಚರಂಡಿಗೆ ಇಳಿದ ಘಟನೆಯು ನಡೆಯಿತು.

ಕಾಡಾನೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆ ಕೊಟ್ಟಿಲ್ಲ ಎಂದು ತಿಳಿದುಬಂದಿದೆ

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಶ್ರೀ ಧ.ಮಂ.ಅನುದಾನಿತ ಸಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಮಡಂತ್ಯಾರು: ಶ್ರೀ ವೀರಾಂಜನೇಯ ಕ್ಷೇತ್ರ ರತ್ನಗಿರಿಯಲ್ಲಿ ಯೋಗ ತರಗತಿ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!