23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಮಚ್ಚಿನ: ನೆತ್ತರ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya

ರಾಜ್ಯ ಮಟ್ಟದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆ: ಎಸ್.ಡಿ.ಎಂ. ವಿದ್ಯಾರ್ಥಿಗೆ ಪ್ರಶಂಸಾ ಪ್ರಮಾಣಪತ್ರ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!