ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

ತೆಕ್ಕಾರು: ತೆಕ್ಕಾರು- ಬಾರ್ಯ ಗ್ರಾಮದ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆ ರಸ್ತೆಯನ್ನು ಸಂಪರ್ಕಿಸುವ ರಸ್ತೆ( ತೋಡಿನಂತಿರುವ) ಡಾಂಬಾರು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಕಳೆದ ಐದು ವರ್ಷಗಳಿಂದ ಕಲ್ಲು ಮತ್ತು ಮಣ್ಣು ಹಾಕಿ ಊರವರು ಅಲ್ಪ ಸ್ವಲ್ಪ ರಿಪೇರಿ ಮಾಡುತ್ತಾ ಬರುತ್ತಿದ್ದು, ಗ್ರಾಮ ಪಂಚಾಯತಿಯಿಂದ ಹಿಡಿದು ಶಾಸಕರಿಗೆ ಹಲವಾರು ಬಾರಿ ಈ ಬಗ್ಗೆ ತಿಳಿಸಿದ್ದರೂ ಯಾರೊಬ್ಬರೂ ಇದರ ತಲೆಕೆಡಿಸಿಕೊಳ್ಳದೇ ಸಂಪೂರ್ಣವಾಗಿ ಕಡೆಗಣಿಸಿದ ಪರಿಣಾಮವಾಗಿ ಇದೀಗ ರಸ್ತೆಯು ಗೋಂವಿದರಗುಳಿಯಿಂದ ಸರಳಿಕಟ್ಟೆಗೆ ಸಂಪರ್ಕಿಸುವ ತೋಡಿನಂತಾಗಿದ್ದು, ವಾಹನ ಸವಾರರು ಹರಸಾಹಸಪಡುತ್ತಾ ಸಂಚರಿಸುವ ದುಸ್ಥಿತಿಗೆ ತಲುಪಿದೆ.

ಈ ರಸ್ತೆಯ ದುಸ್ಥಿತಿಯ ಬಗ್ಗೆ ಈ ಭಾಗದ ರಾಜಕೀಯ ನಾಯಕರು ಅಥವಾ ಈ ಭಾಗದ ಜನರ ಪರವಾಗಿ ತೆಕ್ಕಾರು ಹಾಗೂ ಬಾರ್ಯ ಗ್ರಾಮ ಪಂಚಾಯತಿಗಳು ಜಂಟಿಯಾಗಿ ಒಕ್ಕೊರಲಿನಿಂದ ಶಾಸಕರು ಅಥವಾ ಲೋಕೊಪಯೋಗಿ ಇಲಾಖೆಯ ಗಮನಕ್ಕೆ ತಂದರೆ ಶೀಘ್ರದಲ್ಲೇ ರಸ್ತೆಯ ದುಸ್ಥಿತಿಯಿಂದ ಮುಕ್ತಿಯಾಗಬಹುದು ಎಂದು ನೊಂದ ವಾಹನ ಸವಾರರು ತಿಳಿಸಿದರು.

Related posts

ಮುಂಡಾಜೆ ಪ್ರಾ.ಕೃ.ಪ. ಸ. ಸಂಘದಲ್ಲಿ ಸಹಕಾರಿ ಪಿತಾಮಹ ಮೊಳಹಳ್ಳಿ ಶಿವರಾಯರ 145ನೇ ಜನ್ಮದಿನ ಆಚರಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ವತಿಯಿಂದ ಉಚಿತ ದಂತ ಚಿಕಿತ್ಸೆ ಮತ್ತು ಡೆಂಟಲ್ ಪಿಲ್ಲಿಂಗ್ಸ್ ಹಾಗೂ ವೀಲ್ ಚೇರ್ ವಿತರಣಾ ಕಾರ್ಯಕ್ರಮ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಎಸ್‌ಡಿಎಂ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಕ್ಷೇತ್ರ ಭೇಟಿ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya
error: Content is protected !!