March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಯಕ್ಷಬಿಂದು ಕಲಾರಾಧನಾ ಪ್ರತಿಷ್ಠಾನದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದ ವಿದ್ಯಾರ್ಥಿ ಸಂಘದ ಚುನಾವಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
error: Content is protected !!