ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಮೇ 17ರಂದು ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಸಂಭ್ರಮ’ ಮತ್ತು ಬಹುಭಾಷಾ ಕವಿಗೋಷ್ಠಿ’ ಎಂಬ ವಿನೂತನ ಕಾರ್ಯಕ್ರಮ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಪಡೆದ ಶ್ರೀಮತಿ ಶೈಲಜಾ ಎ.ಎನ್. ರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತರಾಷ್ಟ್ರೀಯ ದಾದಿಯರ ದಿನಾಚರಣೆ

Suddi Udaya
error: Content is protected !!