23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ಕಾರು, ದ್ವಿಚಕ್ರ ವಾಹನ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ದ್ವಿಚಕ್ರ ವಾಹನ ಢಿಕ್ಕಿಯಾದ ಘಟನೆ ನಡೆದಿದೆ.

ದ್ವಿಚಕ್ರ ಸವಾರರಾದ ಮಂಗಳೂರಿನ ಪ್ರಮೋದ್ ಹಾಗೂ ಚಿರಾಗ್ ಅವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ. ಕಾರು ಚಾಲಕ ಬೆಂಗಳೂರಿನ ನೀಲೇಶ್ ಎಂಬವರು, ಅಯ್ಯಪ್ಪ ಗುಡಿ ಬದಿಯ ಅಂಗಡಿಯಿಂದ ಮುಖ್ಯ ರಸ್ತೆಯಾಗಿ ಬೆಳ್ತಂಗಡಿ ಸಾಗುವ ವೇಳೆ ಬೆಳ್ತಂಗಡಿಯಿಂದ ಮಂಗಳೂರು ಸಾಗುವ ದ್ವಿಚಕ್ರ ಸವಾರರು ಬಲಬದಿಗೆ ಏಕಾಏಕಿ ಚಲಿಸಿದ್ದರಿಂದ‌ ಕಾರು ದ್ವಿಚಕ್ರ ಮೇಲೆ ಸಾಗಿದ್ದು, ದ್ವಿಚಕ್ರ ಸವಾರ ಪ್ರಮೋದ್ ಅವರ ಕಾಲಿನ ಎಲುಬಿಗೆ ಸಣ್ಣ ಗಾಯವಾಗಿದ್ದು, ಮತ್ತೋರ್ವರು ಸಣ್ಣಪುಟ್ಟ ಗಾಯದಿಂದ ಪಾರಾಗಿದ್ದಾರೆ.

ತಕ್ಷಣ ಅವರನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಸಿಬಂದಿ ಹಾಗೂ ಸಾರ್ವಜನಿಕರು ಸಂಚಾರ ಸುಗಮಗೊಳಿಸಿದರು. ಬಳಿಕ ವಾಹನ ತೆರವುಗೊಳಿಸಲಾಯಿತು.

Related posts

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಕಾಂಗ್ರೆಸ್ ಪಕ್ಷದಿಂದ ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮರ್ಪಕ ಜ್ಯಾರಿಗಾಗಿ ಬ್ಲಾಕ್, ಗ್ರಾಮ ಮಟ್ಟದಲ್ಲಿ ತರಬೇತಿ: ಇಂದಿರಾ ಸೇವಾ ಸೆಂಟರ್ ಗಳನ್ನು ತೆರೆದು ಫಲಾನುಭವಿಗಳಿಗೆ ಅರ್ಜಿ ನೊಂದಣಿ

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಕಲ್ಮಂಜ : ಬೆರ್ಕೆಯಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಕರಾಟೆ ಚಾಂಪಿಯನ್‌ಶಿಪ್: ಮುಹಮ್ಮದ್ ಹುಝೈರ್ ಕುಮಿಟೆ ವಿಭಾಗದಲ್ಲಿ ಪ್ರಥಮ, ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ

Suddi Udaya

ಕೊಕ್ಕಡ ಗ್ರಾ.ಪಂ. ಸಂಗಮ ಸಂಜೀವಿನಿ ಒಕ್ಕೂಟದಿಂದ ಚಿಕಿತ್ಸಾ ನೆರವು

Suddi Udaya
error: Content is protected !!