ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Leave a Comment

error: Content is protected !!