September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿದ ಪ್ರಕರಣ ಕುದ್ಯಾಡಿಯಲ್ಲಿ ನಡೆದಿದೆ.

ಕುದ್ಯಾಡಿ ಗ್ರಾಮ ಪಿಲ್ಯ ನಿವಾಸಿ ನೀತಾ (34) ಎಂಬವರು ಮೇ 11 ರಂದು ಮಧ್ಯಾಹ್ನ ತನ್ನ ಮನೆಗೆ ಬೀಗ ಹಾಕಿ ತವರು ಮನೆಗೆ ಹೋಗಿದ್ದರು.ಮೇ 13ರಂದು ಮನೆಯ ಬೀಗ ಒಡೆದಿರುವ ಬಗ್ಗೆ ನೆರೆಮನೆಯರವರು ಕರೆ ಮಾಡಿದ್ದು, ಮನೆಗೆ ಬಂದು ಪರಿಶೀಲನೆ ನಡೆಸಿದಾಗ,ಮನೆಯ ಮುಂಭಾಗದ ಬಾಗಿಲಿನ ಬೀಗವನ್ನು ಯಾವುದೇ ಆಯುಧದಿಂದ ಮುರಿದು,ಒಳ ಪ್ರವೇಶಿಸಿ ಬೀರುವಿನ ಬೀಗವನ್ನು ತೆರೆದು, ಅದರಲ್ಲಿದ್ದ ಅಂದಾಜು 1,98,000 ರೂ. ಮೌಲ್ಯದ 33 ಗ್ರಾಂ ಚಿನ್ನಾಭರಣಗಳು ಹಾಗೂ 40,000 ರೂ. ನಗದು ಹಣವನ್ನು ಕಳ್ಳತನ ಮಾಡಿರುವುದು ತಿಳಿದು ಬಂದಿದೆ.ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ತನಿಖೆ ನಡೆಸಲಾಗುತ್ತಿದೆ.

Related posts

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya
error: Content is protected !!