23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಜೆಡಿಎಸ್ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ರವರಿಂದ ರೋಡ್ ಶೋ: ಗಣ್ಯರ ಭೇಟಿ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಮೂಡುಕೋಡಿ ಹಾ.ಉ.ಸ. ಸಂಘ: ಅಧ್ಯಕ್ಷರಾಗಿ ಪುರುಷೋತ್ತಮ ರಾವ್, ಉಪಾಧ್ಯಕ್ಷರಾಗಿ ರಾಕೇಶ್ ಕುಮಾರ್

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya
error: Content is protected !!