25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ‘ವೇದ ಕುಸುಮ’ ಶಿಬಿರ ಸಂಪನ್ನ

ಶಿಶಿಲ: ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ, ದಭೆ೯ತಡ್ಕ ಇದರ ಚಿತ್ಪಾವನ ಸಭಾ ಸಭಾಭವನದಲ್ಲಿ ಮೇ3ರಿಂದ ನಡೆಯುತ್ತಿದ್ದ ‘ವೇದ ಕುಸುಮ’ಶಿಬಿರವು ಮೇ 12ರಂದು ಸಂಪನ್ನಗೊಂಡಿತು.

ಶಿಶಿಲ ಸೀಮಾ ಚಿತ್ಪಾವನ ಸಮಾಜ ಸಂಘದ ಪ್ರಾಯೋಜಕತ್ವದಲ್ಲಿ ನಡೆದ ಶಿಬಿರದಲ್ಲಿ ಬೆಂಗಳೂರು, ಕಾಕ೯ಳ, ಬೆಳ್ತಂಗಡಿ, ಪುತ್ತೂರು ತಾಲೂಕಿನಿಂದ ಸಮಾಜದ 20 ಮಂದಿ ಭಾಗವಹಿಸಿದ್ದರು. ಶಿಬಿರದಲ್ಲಿ ಸಂಧ್ಯಾವಂದನೆ, ಅಥವ೯ಶೀಷ೯, ಗಣಪತಿ ಸೂಕ್ತ,ಶ್ಲೋಕಗಳು, ಪುರುಷ ಸೂಕ್ತಗಳನ್ನು ಕಲಿಸಲಾಯಿತು.

ಉಚಿತವಾಗಿ ನಡೆಸುವ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಘದ ಅಧ್ಯಕ್ಷ ಶ್ರೀವರದ ಶಂಕರ ದಾಮಲೆ ಸ್ವಾಗತಿಸಿದರು. ಗುರುಗಳಾದ ಶ್ರೀಗೋಪಾಲ ಮರಾಠೆ, ಶ್ರೇಯಸ್ ಪಾಳಂದೆ , ಅಶೋಕ ಗೋಗಟೆಯವರಿಗೆ ಗುರು ದಕ್ಷಿಣೆಯನ್ನು ಶಿಬಿರಾಥಿ೯ಗಳು ನೀಡಿ ಗೌರವಿಸಿದರು.

ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್ ಸಮಯೋಚಿತವಾಗಿ ಮಾತನಾಡಿದರು. ಉದಯ ಕುಮಾರ ಅಭ್ಯಂಕಾರರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಕಾರ್ಯಕ್ರಮವನ್ನು ಯೋಗೀಶ ದಾಮಲೆ ನಿರೂಪಿಸಿ ವಂದಿಸಿದರು. ಶಿಬಿರಾಥಿ೯ಯವರ ಹೆತ್ತವರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ವೇಣೂರು: ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಗೆ ‘ಶಿಕ್ಷಣ ಭೀಷ್ಮ ಪ್ರಶಸ್ತಿ’ಯ ಗರಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya
error: Content is protected !!