23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಬೆಂಗಳೂರು ಜೈ ತುಲುನಾಡ್ ನೇತೃತ್ವದಲ್ಲಿ ತುಲುನಾಡ ಆಟಿ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭಾಗಿ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಇಂದಬೆಟ್ಟುವಿನಲ್ಲಿ ದನದ ಕೊಟ್ಟಿಗೆ, ರಬ್ಬರ್ ಸ್ಮೋಕ್ ಹೌಸ್ ಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಹಾನಿ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!