July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಪರೀಕ ‘ ಸೌಖ್ಯವನ’ ದಲ್ಲಿ ಸ್ವಾತಂತ್ರ್ಯ ದಿನಾಚರಣೆ:

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದುಕೊಂಡು ಆತ್ಮಹತ್ಯೆ

Suddi Udaya

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya

ರಾಣಿ ಅಬ್ಬಕ್ಕ 500 ವಿಶೇಷ ಉಪನ್ಯಾಸ ಕಾರ್ಯಕ್ರಮ: ಶ್ರೀಮತಿ ರಶ್ಮಿತಾ ಜೈನ್ ಇವರಿಗೆ ರಾಣಿ ಅಬ್ಬಕ್ಕ ವಿಶೇಷ ಪುರಸ್ಕಾರ

Suddi Udaya
error: Content is protected !!