July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ ಮಂಜೊಟ್ಟಿ ಇಲ್ಲಿಗೆ ಭೇಟಿ ನೀಡಿ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳೊಂದಿಗೆ ಭಜನಾ ಮಂಡಳಿಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಚರ್ಚಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಭಜನಾ ಮಂಡಳಿಯ ನೊಂದಾವಣಿ, ಜಾಗದ ರೆಕಾರ್ಡ್, ಮಂಡಳಿಯ ಲೆಕ್ಕಪತ್ರಗಳು ಮತ್ತು ಭಜನಾ ಮಂಡಳಿಗೆ ಹೊಸ ಸದಸ್ಯರುಗಳನ್ನು ಸೇರಿಸಿಕೊಳ್ಳುವ ಬಗ್ಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಾಗ ಜನರ ಉಪಸ್ಥಿತಿಯನ್ನು ಹೆಚ್ಚಿಸುವ ಬಗ್ಗೆ ಮಾರ್ಗದರ್ಶನ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಗೌರಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ, ಸದಾಶಿವೇಶ್ವರ ಭಜನಾ ಮಂಡಳಿ ಅಧ್ಯಕ್ಷರಾದ ವಸಂತ ಶೆಟ್ಟಿ ಕಾರ್ಯದರ್ಶಿಯಾದ ಶ್ರೀಧರ ಗೌಡ ಮತ್ತು ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಗಾನವಿ ಡಿ. ರವರಿಗೆ ಪಿಎಚ್.ಡಿ ಪದವಿ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಬೂಡುಜಾಲು ರಸ್ತೆ ಬದಿಯಲ್ಲಿದ್ದ ಗೂಡಂಗಡಿಯ ಸೊತ್ತುಗಳಿಗೆ ಕಿಡಿಗೇಡಿಗಳಿಂದ ‌ಹಾನಿ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!