ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

Updated on:

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಮಾರ್ಗದರ್ಶಕರಾದ ಕೆ ವಸಂತ ಬಂಗೇರ ಮತ್ತು ಕ್ಷೇತ್ರದ ಆಂತರಿಕ ಲೆಕ್ಕ ಪರಿಶೋಧಕರಾದ ಹೇರಾಜೇ ಶೇಖರ ಬಂಗೇರವರ ಅಕಾಲಿಕ ನಿಧನದ ಬಗ್ಗೆ ಕ್ಷೇತ್ರದಲ್ಲಿ ಸಂತಾಪ ಸೂಚನೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ ಗೌರವಾಧ್ಯಕ್ಷ ಜಯಂತ್ ನಡಬೈಲ್, ಕಾರ್ಯದರ್ಶಿಗಳಾದ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿ ಪೂಜಾರಿ ಚಿಲಿಂಬಿ, ಕ್ಷೇತ್ರದ ಮುಕ್ತೇಸರ ಶ್ರೀಧರ ಪೂಜಾರಿ, ಕ್ಷೇತ್ರದ ತಂತ್ರಿಗಳಾದ ಶಿವಾನಂದ ಶಾಂತಿ, ಜಯರಾಮ ಬಂಗೇರ ಹೆರಾಜೆ, ನಾರಾಯಣ ಮಚ್ಚಿನ, ಗುರುದೇವ ಕೋ ಆಪರೇಟಿವ್ ಬ್ಯಾಂಕ್ ಬೆಳ್ತಂಗಡಿಯ ಸಿಇಓ ಅಶ್ವಥ್, ಜಗದೀಶ್ ಪೂಜಾರಿ ಬೋರಿಮಾರ್, ಪ್ರಶಾಂತ್ ಕೋಟ್ಯಾನ್ ಪಾದೆಗುತ್ತು ಮುಂತಾದವರು ಹಾಜರಿದ್ದರು.

Leave a Comment

error: Content is protected !!