37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಮಚ್ಚಿನದಲ್ಲಿ 1250 ಬಿದಿರು ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಕರ್ನಾಟಕ ರಾಜ್ಯ ಕುಲಾಲ ಕುಂಬಾರ ಯುವ ವೇದಿಕೆ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅವಿನಾಶ್, ಕಾರ್ಯದರ್ಶಿ ತಿಲಕ್ ರಾಜ್

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya
error: Content is protected !!