April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಶುಭ -ವಿವಾಹ
ಚಿ || ಸುದಿನ ಕುಮಾರ – ಚಿ || ಸೌ || ಪೂವಿ೯

Suddi Udaya

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya

ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ

Suddi Udaya
error: Content is protected !!