September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಧರ್ಮಸ್ಥಳ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ನಿಡ್ಲೆ: ಸತ್ಯನಾರಾಯಣ ರಾವ್ ರವರ ತೋಟಕ್ಕೆ ನುಗ್ಗಿದ ಕಾಡಾನೆ: ಬಾಳೆ ಗಿಡಗಳಿಗೆ ಹಾನಿ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!