23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya

ಮಾಲಾಡಿ ಗ್ರಾ.ಪಂ. ವ್ಯಾಪ್ತಿಯ ಶಕ್ತಿನಗರದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ಸ್ಟೇಟ್ ಟಾಪರ್ ಅನುಪ್ರಿಯರಿಗೆ ಜಿಲ್ಲಾಧಿಕಾರಿಯಿಂದ ಸನ್ಮಾನ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಎಕ್ಸೆಲ್ ನ ವಿದ್ಯಾರ್ಥಿ ಸಂಜನಾ ಜೆ ಇ ಇ ಅಡ್ವಾನ್ಸ್ ನಲ್ಲಿ ರಾಷ್ಟ್ರಕ್ಕೆ 731 ರಾಂಕ್

Suddi Udaya
error: Content is protected !!