September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ: ಕಬಕದ ಇನೋವ ಕಾರು ಡಿಕ್ಕಿ: ಜೀವ ಉಳಿಸಿದ ಮಣ್ಣಿನ ದಿಣ್ಣೆ

ಬೆಳ್ತಂಗಡಿ :ಗೇರುಕಟ್ಟೆ ಸಮೀಪದ ಸಂಬೋಳ್ಯ ತಿರುವು ರಸ್ತೆಯ ಪಕ್ಕದ ಮಣ್ಣಿನ ದಿಣ್ಣೆಗೆ ಇನ್ನೋವ ಕಾರು ಡಿಕ್ಕಿಯಾದ ಘಟನೆ ಮೇ.14 ರಂದು ಸಂಜೆ ನಡೆಯಿತು.

ಪುತ್ತೂರು ತಾಲೂಕಿನ ಕಬಕದ ಅನ್ವರ್ ತಮ್ಮ ಇನೋವ ಕಾರಿನಲ್ಲಿ (ಕೆ.ಎ.೦೩. ಎನ್.ಸಿ ೯೬೬೧) ಕುಟುಂಬದ ಸದಸ್ಯರೊಂದಿಗೆ ಬೆಳ್ತಂಗಡಿ ಕಾಜೂರು ದರ್ಗಾ ಝಿಯಾರತ್ ಯಾತ್ರೆ ಮುಗಿಸಿ ಕಬಕ ತಮ್ಮ ಊರಿಗೆ ಗುರುವಾಯನಕೆರೆ, ಉಪ್ಪಿನಂಗಡಿ ರಾಜ್ಯ ಹೆದ್ದಾರಿ ಮೂಲಕ ಹೋಗುತ್ತಿದ್ದಾಗ ಗೇರುಕಟ್ಚೆ ಸಮೀಪದ ಸಂಬೋಳ್ಯ ರಸ್ತೆಯ ಪಕ್ಕದ ಡಿಕ್ಕಿಯಾಗಿದೆ.ಕಾರಿನಲ್ಲಿ ಚಾಲಕ ಸೇರಿ ಇಬ್ಬರು ಜನ ಗಂಡಸರು ಇಬ್ಬರು ಹೆಂಗಸರು,2ಮಕ್ಕಳು, 1ಚಿಕ್ಕ ಮಗು ಸೇರಿ ಸಣ್ಣ, ಪುಟ್ಟ ಗಾಯಗೊಂಡು ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ.

ಘಟನಾ ಸ್ಥಳದಲ್ಲಿ ವಿದ್ಯುತ್ ಟವರ್ ಹಾಗೂ ವಿದ್ಯುತ್ ಕಂಬಗಳ ಮಧ್ಯೆ ಕೂದಲೇಳೆವ ಅಂತರದಲ್ಲಿದ್ದು ಅದೃಷ್ಟವಶಾತ್ ದೊಡ್ಡ ಆನಾಹುತ ತಪ್ಪಿದೆ.ಚಾಲಕ ನಿದ್ದೆ ಮಂಪರಿನಲ್ಲಿದ್ದು ಅತೀ ವೇಗವಾಗಿ ಕಾರು ಡಿಕ್ಕಿ ಯಾಗಲು ಕಾರಣವೆಂದು ಸ್ಥಳೀಯ ಪ್ರತ್ಯೇಕ್ಷದರ್ಶಿಗಳು ಅಭಿಪ್ರಾಯ ಪಟ್ಟರು.

Related posts

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸೇವಾದಳ ಅಧ್ಯಕ್ಷರಾಗಿ ಇಸುಬು ಯು.ಕೆ ನೇಮಕ

Suddi Udaya

ಧಮ೯ಸ್ಥಳ: 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಶಿಫಾರಸ್ಸು ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರಿಗೆ ಸಮಿತಿಯಿಂದ ಗೌರವಾರ್ಪಣೆ

Suddi Udaya
error: Content is protected !!