23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

ಚಾಮಾ೯ಡಿ: ಕಳೆದ ಮೂರು ದಿನಗಳಿಂದ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಸಲಗ ಆಗಾಗ ಕಂಡು ಬರುತ್ತಿದ್ದು ವಾಹನ ಸವಾರರಲ್ಲಿ ಭೀತಿಯ ವಾತಾವರಣ ಮೂಡಿದೆ. ಭಾನುವಾರ ರಾತ್ರಿ ಒಂದನೇ ತಿರುವಿನ ಸಮೀಪ ಕಾಡಾನೆ ಕಂಡುಬಂದಿತ್ತು‌.ಬಳಿಕ ಸೋಮವಾರ ರಾತ್ರಿ ಎರಡು ಹಾಗೂ ಮೂರನೇ ತಿರುವಿನ ಬಳಿಯು ಕಾಡಾನೆಯನ್ನು ವಾಹನ ಸವಾರರು ಕಂಡಿದ್ದಾರೆ ಮಂಗಳವಾರ ಬೆಳಿಗ್ಗೆ 2ನೇ ತಿರುವಿನ ಬಳಿ ಆನೆ ರಸ್ತೆ ಮಧ್ಯೆ ನಿಂತು ಈಚಲ ಮರವನ್ನು ತಿನ್ನುತ್ತಿರುವುದು ಕಂಡುಬಂದಿದೆ. ಈ ಹಿಂದೆಯೂ ಎರಡು ಮೂರು ಬಾರಿ ಒಂಟಿ ಸಲಗ ಚಾರ್ಮಾಡಿ ಘಾಟಿಯಲ್ಲಿ ಕಂಡು ಬಂದಿದ್ದು ವಾಹನ ಸವಾರರಿಗೆ ತೊಂದರೆ ಉಂಟಾಗಿತ್ತು. ಪ್ರಸ್ತುತ ಕಾಡಾನೆ ಪದೇ ಪದೇ ಘಾಟಿ ರಸ್ತೆ ವ್ಯಾಪ್ತಿಯಲ್ಲಿ ಕಾಣಿಸುತ್ತಿದೆ ಪ್ರತಿದಿನ ಸಾವಿರಾರು ವಾಹನಗಳು ಓಡಾಟ ನಡೆಸುವ ಇಲ್ಲಿ ಕಾಡಾನೆ ರಸ್ತೆ ಬದಿ ಕಂಡುಬರುವುದರಿಂದ ಹಲವು ಕಾಲ ವಾಹನಗಳು ಸರದಿ ನಿಲ್ಲಬೇಕಾದ ಸ್ಥಿತಿ ಇದೆ ಹಾಗೂ ಈ ಹೊತ್ತಿನಲ್ಲಿ ಜೀವ ಭಯದೊಂದಿಗೆ ಕಾಯಬೇಕು.

ಚಾರ್ಮಾಡಿ ಘಾಟಿ ವ್ಯಾಪ್ತಿಯಲ್ಲಿ ಕಾಡಾನೆ ನಿರಂತರ ಕಂಡು ಬರುತ್ತಿದ್ದು ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಕುರಿತು ಜನರು ಪ್ರಶ್ನಿಸುತ್ತಿದ್ದಾರೆ. ಇದುವರೆಗೆ ಕಾಡಾನೆ ವಾಹನ ಅಥವಾ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ನೀಡಿಲ್ಲ‌ ಆದರೆ ಕೆಲವು ವರು ಆನೆಯನ್ನು ಓಡಿಸುವ ಸಲುವಾಗಿ ಕಲ್ಲುಗಳನ್ನು ಬೀರುವುದು, ಫೋಟೋ ಕ್ಲಿಕ್ಕಿಸಲು ಮುಂದಾಗುವುದು, ಬೊಬ್ಬೆ ಹಾಕುವುದು ಇತ್ಯಾದಿ ಮಾಡುತ್ತಾರೆ‌. ಇದರಿಂದ ಆನೆ ಕೋಪಗೊಳ್ಳುವ ಸಂಭವವಿದ್ದು, ಈ ಸಮಯ ಜನ ವಾಹನದ ಮೇಲೆ ದಾಳಿಗೂ ಮುಂದಾಗಬಹುದು.

ಒಟ್ಟಿನಲ್ಲಿ ಘಾಟಿ ಪ್ರಯಾಣಕ್ಕೆ ಸೂಕ್ತ ಮುನ್ನೆಚ್ಚರಿಕೆ ಕೈಗೊಳ್ಳಬೇಕಾಗಿದ್ದು ರಾತ್ರಿ ಪ್ರಯಾಣವನ್ನು ಆದಷ್ಟು ಮುಂದೂಡಿದರೆ ಉತ್ತಮ.

Related posts

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಮಾಲೋಚನ ಸಭೆ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಎಡನೀರು ಮಠದ ಸಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ

Suddi Udaya

ಯುವವಾಹಿನಿ ವೇಣೂರು ಘಟಕದ ಅಧ್ಯಕ್ಷರಾಗಿ ಶುಭಕರ್ ಪೂಜಾರಿ, ಕಾರ್ಯದರ್ಶಿಯಾಗಿ ರಕ್ಷಿತ್ ಬಂಗೇರ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಯುವ ರೆಡ್ ಕ್ರಾಸ್ ಘಟಕದ ಅಂಗವಾಗಿ ರಕ್ತದಾನ ಶಿಬಿರ

Suddi Udaya
error: Content is protected !!