23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ : ಮಾಜಿ ಶಾಸಕ ವಸಂತ ಬಂಗೇರ ಮತ್ತು ಎಮ್. ತುಂಗಪ್ಪ ಗೌಡರಿಗೆ ಶ್ರದ್ಧಾಂಜಲಿ

ಬೆಳ್ತಂಗಡಿ: ಕೆ.ಪಿ.ಸಿ.ಸಿ ಯ ಉಪಾಧ್ಯಕ್ಷರು ಹಾಗೂ ಕರ್ನಾಟಕ ಸರಕಾರದ ಮಾಜಿ ಸಚಿವರಾದ ಕೆ. ಗಂಗಾಧರ ಗೌಡ ರವರ ಕಛೇರಿಯಲ್ಲಿ ಮಾಜಿ ಶಾಸಕರು ಹಾಗೂ ಸರಕಾರದ ಮಾಜಿ ಮುಖ್ಯ ಸಚೇತಕರಾದ ಕೆ. ವಸಂತ ಬಂಗೇರ ಮತ್ತು ಮಾಜಿ ಜಿಲ್ಲಾ ಪಂ. ಸದಸ್ಯರೂ, ಹಿರಿಯ ಸಹಕಾರಿಗಳಾದ ತುಂಗಪ್ಪ ಗೌಡರಿಗೆ ಮೇ 13 ರಂದು ಶ್ರದ್ಧಾಂಜಲಿ ಅರ್ಪಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನ ಪ್ರಾರ್ಥನೆ ಮಾಡಲಾಯಿತು.


ಕೆ. ಗಂಗಾಧರ ಗೌಡರು ವಸಂತ ಬಂಗೇರರ ಗುಣಗಾನ ಮಾಡಿ ಅವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸಿದರು. ಇನ್ನೋರ್ವ ರಾಜಕಾರಿಣಿ ತುಂಗಪ್ಪ ಗೌಡರ ಬಗ್ಗೆ ನುಡಿನಮನ ಸಲ್ಲಿಸಿ ಅವರ ಆತ್ಮಕ್ಕೂ ಶಾಂತಿ ಸಿಗುವಂತೆ ಪ್ರಾರ್ಥಿಸಿದರು. ಸಭೆಯಲ್ಲಿ ಮಾಜಿ ಜಿಲ್ಲಾ ಪಂ. ಸದಸ್ಯರಾದ ಇ. ಸುಂದರ ಗೌಡ, ಮಾಜಿ ಜಿಲ್ಲಾ ಪಂ. ಸದಸ್ಯರಾದ ಬಿ. ರಾಜಶೇಖರ ಅಜ್ರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೆ. ಬಾಲಕೃಷ್ಣ ಗೌಡ, ನಿವೃತ್ತ ಎ.ಸಿ.ಎಫ್. ಎಮ್. ಎಸ್. ವರ್ಮ, ಕೆ.ಪಿ.ಸಿ.ಸಿ ಯ ಸದಸ್ಯರಾದ ಕೇಶವ ಗೌಡ ಬೆಳಾಲು, ತಾಲೂಕು ಪಂ. ಮಾಜಿ ಅಧ್ಯಕ್ಷರಾದ ಮುಕುಂದ ಸುವರ್ಣ, ತಾಲೂಕು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಅಧ್ಯಕ್ಷರಾದ ಕೆ. ಸಲೀಂ ಗುರುವಾಯನಕೆರೆ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಕಾರ್ಯದರ್ಶಿಗಳಾದ ಬಿ.ಎ. ನಝೀರ್, ಕೆ.ಪಿ.ಸಿ.ಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ರಹಿಮಾನ್ ಪಡ್ಪು, ಪ್ರಮುಖರಾದ ಕೆ.ಎಸ್. ಅಬ್ದುಲ್ಲ, ಬಿ. ಮೆಹಬೂಬ್, ಕೆ. ಆನಂದ ಶೆಟ್ಟಿ, ನ. ಪಂ. ಸದಸ್ಯ ಜಗದೀಶ್ ಡಿ., ರಮೀಝ್ ಬೆಳ್ತಂಗಡಿ, ಸತ್ತಾರ್ ಸಾಹೇಬ್, ಎಸ್.ಎಮ್. ಕೋಯ ಉಜಿರೆ, ಯು.ಎ. ಹಮೀದ್, ಬಿ. ಎಮ್. ಹಮೀದ್, ಕೆ.ಪಿ.ಸಿ.ಸಿ ಯ ಸದಸ್ಯರಾದ ಕೆ. ಮೋಹನ್ ಶೆಟ್ಟಿಗಾರ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಕೆ. ಶೈಲೇಶ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಎಸ್ಸಿ ಘಟಕದ ಪ್ರಧಾನ ಕಾರ್ಯದರ್ಶಿ ಅವಿನಾಶ್ ಕುರ್ತ್ತೋಡಿ, ಪ್ರಭಾಕರ ಓಡಿಲ್ನಾಳ, ರಮೇಶ್ ರೆಂಕೆದಗುತ್ತು, ಗುರುಪ್ರಸಾದ್ ಮಾಲಾಡಿ, ಶಬೀರ್ ಮದ್ದಡ್ಕ, ಕೆ. ಬಾಲಕೃಷ್ಣ ಗೌಡ, ಸಂತೋಷ್ ಕುಮಾರ್ ಕಣಿಯೂರು, ಮುನಿರಾಜ ಅಜ್ರಿ, ಪುತ್ತಾಕ ಜೈ ಭಾರತ್, ಬಾಬು ಕೆ. ತೋಟತ್ತಾಡಿ, ಜನಾರ್ಧನ ಕುಲಾಲ್, ಮೂಸ ಕುಂಞ್ಞಿ, ಆಗಸ್ಟಿನ್ ನಡ, ಎಚ್. ರಾಮಕೃಷ್ಣ ಗೌಡ, ಸಿನಾನ್, ಲಕ್ಷಣ ಫಂಡಿಜೆ ಮುಂತಾದವರು ಉಪಸ್ಥಿತರಿದ್ದರು.

Related posts

ಪೆರಿಂಜೆ ಎಸ್‌ಡಿಎಂ ಅನುದಾನಿತ ಪ್ರೌಢಶಾಲೆಗೆ ಶೇ.96 ಫಲಿತಾಂಶ

Suddi Udaya

ಪೆರ್ಲ-ಬೈಪಾಡಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮ ಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ

Suddi Udaya

ಹೊಸಪಟ್ಣ ದೊಡ್ಯಾರು ಮನೆಯ ಶ್ರೀಮತಿ ಸುಂದರಿ ನಿಧನ

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya
error: Content is protected !!