25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ನೂತನ ಸಂಸದ ಕ್ಯಾ| ಬೃಜೇಶ್ ಚೌಟರಿಗೆ ಅಭಿನಂದನೆ – ವಿದ್ಯಾರ್ಥಿ ವೇತನ ವಿತರಣೆ – ಆಟಿ ಕೂಟ ಕಾಯ೯ಕ್ರಮ

Suddi Udaya

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!