23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ಪಡ್ಲಾಡಿ ಸ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya

ಕಲ್ಮಂಜ ಶಾಲಾ ಶತ ಸಂಭ್ರಮಕ್ಕೆ ಮುಖ್ಯಮಂತ್ರಿಗಳಿಂದ ಶುಭಹಾರೈಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲಾ ವಾರ್ಷಿಕೋತ್ಸವ “ಮನೋಲ್ಲಾಸ ಸಾಂಸ್ಕೃತಿಕ ಸಂಭ್ರಮ -2025”

Suddi Udaya

ಬೆಳ್ತಂಗಡಿ : ಯುವ ವಕೀಲರ ವೇದಿಕೆ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಕಟ್ಟೆ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆಯ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ ಫೆ.17, 18, 19ರಂದು ಮಾರಿಗುಡಿ ಮೈದಾನದಲ್ಲಿ ‘ಬೆಳ್ತಂಗಡಿ ಸಂಭ್ರಮ’

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya
error: Content is protected !!