22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

ಬೆಳ್ತಂಗಡಿ; ನ್ಯಾಯವಾದಿಯಾಗಿ ಮತ್ತು ನೋಟರಿ ಪಬ್ಲಿಕ್ ಆಗಿ ಬೆಳ್ತಂಗಡಿಯಲ್ಲಿ ಕಳೆದ 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸಮಾಜ ಸೇವಕ ಮುರಳಿ ಬಲಿಪ ಅವರು ವೃದ್ದಾಶ್ರಮ ವಾಸಿಗಳ ಜೊತೆಗೆ ತನ್ನ ಹುಟ್ಟುಹಬ್ಬ ಆಚರಿಸುವ ಮೂಲಕ ಮಾದರಿಯಾಗಿದ್ದಾರೆ.ಜೊತೆಗೆ ಅವರು ಅಂದು ಎರಡು ಗೋಶಾಲೆಗಳಿಗೂ ದೇಣಿಗೆ ಸಮರ್ಪಿಸಿದ್ದಾರೆ.

ಹುಟ್ಟುಹಬ್ಬದ ಪ್ರಯುಕ್ತ ಬಲಿಪ ರೆಸಾರ್ಟ್ ನಲ್ಲಿ ಬೆಳ್ತಂಗಡಿ ಅನುಗ್ರಹ ವೃದ್ಧಾಶ್ರಮ ಜೊತೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡರು.ತನ್ನ ಹುಟ್ಟುಹಬ್ಬದ ದಿನವೇ ಬೆಳಗ್ಗೆ ತಾಲೂಕಿನ‌ ಗುಂಡೂರಿಯಲ್ಲಿರುವ ಗೋಶಾಲೆಗೆ ತೆರಳಿ ಜಾನುವಾರುಗಳಿಗೆ ಒಂದು ಕ್ವಿಂಟಾಲ್ ಕಲ್ಲಂಗಡಿ ಹಣ್ಣನ್ನು ಸ್ವತಃ ತಾವೇ ತಿನ್ನಿಸಿ ಖುಷಿಪಟ್ಟರು.

ಅಲ್ಲದೆ ಅಲ್ಲಿನ ಗೋಶಾಲೆಗೆ ಹಾಗೂ ತಾಲೂಕಿನ ಕಳೆಂಜ ಗ್ರಾಮದಲ್ಲಿ, ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್‌ ನವರು ಮುನ್ನಡೆಸುವ ನಂದಗೋಕುಲ ಗೋಶಾಲೆಗೆ ತಲಾ 5 ಸಾವಿರದಂತೆ ದೇಣಿಗೆ ಸಮರ್ಪಿಸಿ ವಿಶೇಷತೆ ಮೆರೆದರು. ಅವರ ಈ ಸೇವೆಗೆ ಪತ್ನಿ ಮನೋರಮಾ ಬಲಿಪ, ಇಬ್ಬರು ಪುತ್ರರಾದ ಮಯೂರ್ ಬಲಿಪ ಹಾಗೂ ಮಂದಾರ ಬಲಿಪ ಅವರು ಸಾಥ್ ನೀಡಿದರು.ವಿದೇಶಿ ಸಂಸ್ಕೃತಿ ಬೆಂಬತ್ತಿ‌ ನಾನಾ ತರದ ವಿಕೃತಿಗಳನ್ನು ಮೆರೆಯುವ ಜನರ ಮಧ್ಯೆ ಮುರಳಿ ಬಲಿಪ ಅವರು ಭಾರತೀಯತೆ ಮತ್ತು ಮಾನವೀಯತೆಗೆ ಒತ್ತು ನೀಡಿದರು.

Related posts

ನೆರಿಯ: ಶ್ರೀ ಕ್ಷೇತ್ರ ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಗುರುವಾಯನಕೆರೆ ಪೇಟೆಯಲ್ಲಿ ಬೀದಿ ನಾಯಿಗಳ ಹಾವಳಿ: ಶಾಲಾ ಮಕ್ಕಳು, ದ್ವಿಚಕ್ರ ವಾಹನ ಸವಾರರಿಗೆ ತಂದೊಡ್ಡಿದ ಸಂಕಷ್ಟ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಮಚ್ಚಿನ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಸಂಪೂರ್ಣ ಸುರಕ್ಷ ಕಾರ್ಡ್ ವಿತರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಯೋಧ್ಯೆ ಶ್ರೀರಾಮಮಂದಿರ ನಿರ್ಮಾಣದ ಉಸ್ತುವಾರಿ ವಿ.ಹಿಂ.ಪ. ಸಮಿತಿ ಪ್ರಧಾನಕಾರ್ಯದರ್ಶಿ ಗೋಪಾಲ್ ಜಿ. ಭೇಟಿ

Suddi Udaya

ವಿಶ್ವ ಜಾಂಬೂರಿಗೆ ಎಕ್ಸೆಲ್ ನ ವಿದ್ಯಾರ್ಥಿಗಳು ಆಯ್ಕೆ

Suddi Udaya
error: Content is protected !!