July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯಲ್ಲಿ ಭಜನಾ ಪರಿಷತ್ತು ಕಾರ್ಯದರ್ಶಿಯಿಂದ ಅಹವಾಲು ಸ್ವೀಕಾರ

ಬೆಳ್ತಂಗಡಿ: ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂಡಳಿ ನಡ ಇಲ್ಲಿಗೆ ಭೇಟಿ ನೀಡಿ ನಂತರ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿ ಕನ್ಯಾಡಿ ಮಂಜೊಟ್ಟಿ ಇಲ್ಲಿಗೆ ಭೇಟಿ ನೀಡಿ ಭಜನಾ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರುಗಳೊಂದಿಗೆ ಭಜನಾ ಮಂಡಳಿಗೆ ಸಂಬಂಧಿಸಿದ ಹಲವಾರು ವಿಚಾರಗಳನ್ನು ಚರ್ಚಿಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿದರು ಹಾಗೂ ಭಜನಾ ಮಂಡಳಿಯ ನೊಂದಾವಣಿ, ಜಾಗದ ರೆಕಾರ್ಡ್, ಮಂಡಳಿಯ ಲೆಕ್ಕಪತ್ರಗಳು ಮತ್ತು ಭಜನಾ ಮಂಡಳಿಗೆ ಹೊಸ ಸದಸ್ಯರುಗಳನ್ನು ಸೇರಿಸಿಕೊಳ್ಳುವ ಬಗ್ಗೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡುವಾಗ ಜನರ ಉಪಸ್ಥಿತಿಯನ್ನು ಹೆಚ್ಚಿಸುವ ಬಗ್ಗೆ ಮಾರ್ಗದರ್ಶನ ಮಾಡಿದರು.


ಈ ಸಂದರ್ಭದಲ್ಲಿ ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಗೌರಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ, ಸದಾಶಿವೇಶ್ವರ ಭಜನಾ ಮಂಡಳಿ ಅಧ್ಯಕ್ಷರಾದ ವಸಂತ ಶೆಟ್ಟಿ ಕಾರ್ಯದರ್ಶಿಯಾದ ಶ್ರೀಧರ ಗೌಡ ಮತ್ತು ಇನ್ನಿತರ ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಕಳೆಂಜ ನಂದಗೋಕುಲ ಗೋಶಾಲೆಗೆ ಖ್ಯಾತ ಯಕ್ಷಗಾನ ಕಲಾವಿದ ಉಜಿರೆ ಅಶೋಕ ಭಟ್ ಭೇಟಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ನಾಳ ಗೋಪಾಲಕೃಷ್ಣ ಕಾಮತ್ ನಿಧನ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಕರಿಕಲ್ ಶಾಖಾ ಮಠದಲ್ಲಿ ಜು.21ರಿಂದ ಆ.30ರವರೆಗೆ ಕನ್ಯಾಡಿ ಶ್ರೀ ರಾಮಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವ್ರತ

Suddi Udaya
error: Content is protected !!