24.8 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಕಳೆಂಜ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya

ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಎಲ್.ಹೆಚ್. ಮಂಜುನಾಥ್

Suddi Udaya

ಬಂದಾರು: ಮುಂಡೂರು ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya
error: Content is protected !!