ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಉಜಿರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆಯ 376ನೇ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ: ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟ ಉದ್ಘಾಟನೆ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya
error: Content is protected !!