September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುಲ್ಕೇರಿ: ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಭೇಟಿ

ಸುಲ್ಕೇರಿ: ಸುಲ್ಕೇರಿ ಗ್ರಾಮದ ತೀರಾ ಹಿಂದುಳಿದ ಪ್ರದೇಶವಾದ ಕೇಡೇಲು ಪರಿಸರಕ್ಕೆ ಮಾಜಿ ಸಚಿವ ಸುರೇಶ್ ಕುಮಾರ್ ಮೇ 14 ರಂದು ಖಾಸಗಿ ಭೇಟಿ ನೀಡಿದರು.


ಸೆಲ್ಕೋ ಸಂಸ್ಥೆಯ ಗುರುಪ್ರಸಾದ್ ಶೆಟ್ಟಿ, ಉದಯ, ಗಿರಿಜಾ, ಸುರೇಶ್, ಗಿರೀಶ್ ಗೌಡ, ಕೆಂಪರಾಜು, ನವೀನ್ ನೆರಿಯ ಇವರ ಜತೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿ ಕೆಲವು ಮನೆಗಳಿಗೆ ಭೇಟಿ ನೀಡಿದರು.


ಕೇಡೇಲು ಪರಿಸರದಲ್ಲಿ ಏಳು ಮನೆಗಳಿದ್ದು ಇಲ್ಲಿಗೆ ಸರಿಯಾದ ರಸ್ತೆ ಹಾಗು ವಿದ್ಯುತ್ ವ್ಯವಸ್ಥೆ ಕೂಡ ಇರುವುದಿಲ್ಲ.ಇಲ್ಲಿನ ಜನಜೀವನ ಕುರಿತು ವೀಕ್ಷಿಸಿ, ಮಾತನಾಡಿ “ನಮ್ಮ ನಿರ್ಧಾರಗಳು ಕಟ್ಟ ಕಡೆಯ ವ್ಯಕ್ತಿಗಳ ಜೀವನಕ್ಕೆ ಬೆಳಕಾಗಬೇಕು. ಅಂತಹ ವ್ಯವಸ್ಥೆಯನ್ನು ಇಲ್ಲಿ ಸೆಲ್ಕೋ ಸಂಸ್ಥೆ ನಿರ್ವಹಿಸಿರುವುದು ಶ್ಲಾಘನೀಯ. ಆಯ್ಕೆ ಮಾಡಿಕೊಳ್ಳುವ ಕಾರ್ಯಗಳಿಂದ ಜನರಿಗೆ ಉಪಯೋಗವಾದರೆ ಮಾಡಿದ ಕೆಲಸದಲ್ಲಿ ತೃಪ್ತಿ ಸಿಗುತ್ತದೆ” ಎಂದರು.

Related posts

ಸೂಳಬೆಟ್ಟು ಹಾಲು ಉತ್ಪಾದಕ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಫುಟ್ಬಾಲ್ ಪಂದ್ಯಾಟ: ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya
error: Content is protected !!