23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಎಂಬವರ ಮನೆಗೆ ಬಡಿದ ಸಿಡಿಲು: ಮನೆಯ ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಗೆ ಹಾನಿ

ಬೆಳ್ತಂಗಡಿ: ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಮತ್ತೆ ಗುಡುಗು, ಸಿಡಿಲು ಸಹಿತ ಬಾರಿ ಮಳೆಯಾಗಿದೆ. ಉಜಿರೆ ಗ್ರಾಮದ ಮಾಚಾರು ಗುಂಡಿಕಂಡ ಮಣಿಕ್ಕೆ ಎಂಬಲ್ಲಿ ಬಾಬು ಮುಗೇರ ಎಂಬವರ ಮನೆಗೆ ಸಿಡಿಲು ಬಡಿದು ಮೀಟರ್ ಬೋರ್ಡ್, ಗೋಡೆ ಸಹಿತ, ಶೀಟ್ ಪುಡುಪುಡಿಯಾಗಿದೆ.
ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ. ಸದಸ್ಯ ಗುರುಪ್ರಸಾದ್ ‘ಟಿ ನೀಡಿ ವರದಿ ಪಡೆದಿದ್ದಾರೆ.


ಕೊಯ್ಯೂರು ಗ್ರಾಮದ ಮೈಂದಕೊಡಿ ಲೋಕಯ್ಯ ಗೌಡರ ಮನೆಯ ಬಳಿ ತೆಂಗಿನ ಮರಕ್ಕೆ ಸಿಡಿಲು ಬಿದ್ದು ಬೆಂಕಿ ಹತ್ತಿಕೊಂಡ ಘಟನೆ ನಡೆಯಿತು. ಮನೆಮಂದಿ ಇರುವ ವೇಳೆಗೆ ಸಿಡಿಲು ಬಡಿದಿದ್ದು, ಮನೆಮಂದಿ ಬೆಚ್ಚಿನಿದ್ದಿದ್ದರು. ಬಳಿಕ ಗಮನಿಸಿದಾಗ ತೆಂಗಿನ ಮರದಲ್ಲಿ ಬೆಂಕಿ ಕೆಲ ಹೊತ್ತು ಉರಿದಿದೆ.


ಬೆಳ್ತಂಗಡಿ, ನಡ, ಮಂಜೊಟ್ಟಿ, ಗುರುವಾಯನಕೆರೆ ಸಹಿತ ಗೇರುಕಟ್ಟೆ, ಕಳಿಯ ಇತರೆಡೆ ಮಳೆಯಾಗಿದ್ದು, ಗುರುವಾಯನಕೆರೆ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಚರಂಡಿ ಕಾರ್ಯ ಅಪೂರ್ಣಗೊಂಡ ಪರಿಣಾಮ ಚರ್ಚ್ ರಸ್ತೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಂತು ಪಕ್ಕಡ ಅಂಗಡಿ ಮುಂಗಟ್ಟುಗಳ ಸುತ್ತ ನೀರು ನಿಂತಿತ್ತು. ವಾಹನ ಸವಾರರು ಪರದಾಡುವಂತಾಯಿತು.

.

Related posts

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya
error: Content is protected !!